ಬೆಳಗಾವಿ: ‘ಗ್ರಾಮೀಣ ಕ್ಷೇತ್ರಕ್ಕೆ ವಿವಿಧ ಇಲಾಖೆಗಳಿಂದ ಇನ್ನಷ್ಟು ಯೋಜನೆಗಳು ಮಂಜೂರಾಗಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಪರ್ವ ನಡೆಯಲಿದೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.
ಕ್ಷೇತ್ರದ ಹಿಂಡಲಗಾ ಮಾಸ್ತಿನಗರ ಕಾಲೊನಿಯಲ್ಲಿ ಎಸ್.ಸಿ.ಪಿ. ಅನುದಾನದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ನಾನು ಶಾಸಕಿಯಾದ ನಂತರ ಯಾವ ಯಾವ ಇಲಾಖೆಯಿಂದ ಸಾಧ್ಯವೋ ಅಲ್ಲೆಲ್ಲಾ ಹಣ ತಂದಿದ್ದೇನೆ. ನನಗೆ ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಯೋಗಕ್ಷೇಮ ನೋಡುವುದನ್ನು ಬಿಟ್ಟು ಬೇರೇನೂ ಕೆಲಸ ಇಲ್ಲ. ಇದರಲ್ಲೇ ತೊಡಗಿಕೊಂಡಿದ್ದೇನೆ’ ಎಂದರು.
ನಿವಾಸಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ರಾಮಚಂದ್ರ ಕುರೇಮನಿಕರ, ಹೇಮಂತ ಹಿತ್ತಲಮನಿ, ಅಶೋಕ ಕಾಂಬಳೆ, ರಾಹುಲ್ ಉರನಕರ್ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.