ADVERTISEMENT

‘ವಿಶ್ವನಾಥ್ ಜೊತೆ ನಾನಿರುತ್ತೇನೆ’

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 13:42 IST
Last Updated 30 ನವೆಂಬರ್ 2020, 13:42 IST

ಬೆಳಗಾವಿ: ‘ವಿಶ್ವನಾಥ್‌ ಜೊತೆ ನಾನಿರುತ್ತೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಲ್ಲಿ ಸೋಮವಾರ ತಿಳಿಸಿದರು.

‘ಎ.ಎಚ್. ವಿಶ್ವನಾಥ್ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದರೂ ಅವರ ಅನರ್ಹತೆ ಮುಂದುವರಿದಿದೆ. ನಾಮನಿರ್ದೇಶನವು ಚುನಾವಣೆಗೆ ಸಮವಲ್ಲ’ ಎಂದು ಹೈಕೋರ್ಟ್‌ ಹೇಳಿರುವ ಬಗ್ಗೆ ಸಚಿವರು ಮೇಲಿನಂತೆ ಪ್ರತಿಕ್ರಿಯಿಸಿದರು.

‘ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಳೆದ ಡಿಸೆಂಬರ್‌ನಲ್ಲಿ ಉಪ ಚುನಾವಣಾ ಪ್ರಕ್ರಿಯೆ ಆರಂಭವಾಗಿತ್ತು. ಸ್ಪೀಕರ್ ಅವರ ತೀರ್ಪಿನ ಬಗ್ಗೆ ಕೊನೆ ಗಳಿಗೆಯಲ್ಲಿ ಆದೇಶವಾಯಿತು. ಈ ಕಾರಣದಿಂದಾಗಿ ನಾವು ಮೇಲ್ಮನವಿ ಸಲ್ಲಿಸಲಿಲ್ಲ. ಶೀಘ್ರವೆ ಮಿತ್ರರೆಲ್ಲರೂ ಸಭೆ ನಡೆಸಿ ಚರ್ಚಿಸುತ್ತೇವೆ. ನಮ್ಮಲ್ಲಿ ಒಬ್ಬರಿಗೆ ಅನ್ಯಾಯ ಆಗಿರುವುದರಿಂದ ಎಲ್ಲರೂ ಸೇರುತ್ತೇವೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.