ಬೆಳಗಾವಿ: ‘ಸಚಿವ ಸ್ಥಾನ ಬೇಕು ಎನ್ನುವ ಆಸೆ ನನಗೂ ಇದೆ. ಆದರೆ, ಆ ಗಾದಿಗಾಗಿ ಲಾಬಿ ಅಥವಾ ಬ್ಲಾಕ್ಮೇಲ್ ಮಾಡುವುದಿಲ್ಲ’ ಎಂದು ಕಾಂಗ್ರೆಸ್ಶಾಸಕಿಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪಕ್ಷ ನನಗೆ ಬಹಳಷ್ಟು ಅವಕಾಶ ನೀಡಿದೆ. ಈಗ ಸಚಿವೆಯಾಗಿ ಕೆಲಸ ಮಾಡು ಎಂದು ಹೇಳಿದರೆ, ನಿರ್ವಹಿಸಲು ಸಿದ್ಧವಿದ್ದೇನೆ. ಆದರೆ, ನನ್ನ ಪರ ಯಾರೂ ಲಾಬಿ ಮಾಡುವುದಿಲ್ಲ’ ಎಂದು ಮಾರ್ಮಿಕವಾಗಿ ಹೇಳಿದರು.
‘ಆಪರೇಷನ್ ಕಮಲ ನಡೆಯುತ್ತಿರುವ ಬಗ್ಗೆ ಮಾಹಿತಿ ಇಲ್ಲ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.