ADVERTISEMENT

ಬೆಳಗಾವಿ | ಅನ್ನಭಾಗ್ಯ ಯೋಜನೆ ಅಕ್ಕಿ ಅಕ್ರಮ ಸಂಗ್ರಹ: ಆರೋಪ

​ಪ್ರಜಾವಾಣಿ ವಾರ್ತೆ
Published 25 ಮೇ 2025, 17:31 IST
Last Updated 25 ಮೇ 2025, 17:31 IST
   

ಬೆಳಗಾವಿ: ತಾಲ್ಲೂಕಿನ ಪೀರನವಾಡಿ ಗ್ರಾಮದ ಗೋದಾಮಿನಲ್ಲಿ 250ಕ್ಕೂ ಅಧಿಕ ಮೂಟೆಗಳಲ್ಲಿ ಅನ್ನಭಾಗ್ಯ ಯೋಜನೆ ಅಕ್ಕಿ ಸಂಗ್ರಹಿಸಿದ ಆರೋಪ ಗ್ರಾಮಸ್ಥರಿಂದ‌ ಕೇಳಿಬಂದಿದೆ.

'ನ್ಯಾಯಬೆಲೆ ಅಂಗಡಿಗಳಲ್ಲಿ ಕಡಿಮೆ ದರಕ್ಕೆ ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು' ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

'ಗ್ರಾಮಸ್ಥರ ದೂರಿನ ಮೇರೆಗೆ ಆಹಾರ ನಿರೀಕ್ಷಕರು ಗೋದಾಮಿನ ಮೇಲೆ ದಾಳಿ ಮಾಡಿ, ಅಕ್ಕಿಯ ಜಪ್ತಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ' ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ನಾಯಕ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.