ADVERTISEMENT

ಬೆಳಗಾವಿ: ದೇಶದ ಸ್ವಾತಂತ್ರ್ಯಬಲಿದಾನಗಳ ಪ್ರತೀಕ- ಡಾ.ಎಂ. ಜಯಪ್ಪ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 12:41 IST
Last Updated 16 ಆಗಸ್ಟ್ 2020, 12:41 IST
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನಲ್ಲಿ ಶನಿವಾರ ಸ್ವಾತಂತ್ರೋತ್ಸವ ಆಚರಿಸಲಾಯಿತು
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನಲ್ಲಿ ಶನಿವಾರ ಸ್ವಾತಂತ್ರೋತ್ಸವ ಆಚರಿಸಲಾಯಿತು   

ಬೆಳಗಾವಿ: ‘ಭಾರತದ ಸ್ವಾತಂತ್ರ್ಯ ಹಲವು ಬಲಿದಾನಗಳ ಪ್ರತೀಕವಾಗಿದೆ’ ಎಂದುಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನ ಪ್ರಾಚಾರ್ಯ ಡಾ.ಎಂ. ಜಯಪ್ಪ ಹೇಳಿದರು.

ನಗರದ ಕಾಲೇಜಿನ ಆವರಣದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಭಾರತವು ಅನೇಕ ಸಮಸ್ಯೆಗಳನ್ನು ಎದುರಿಸಿತು. ಡಾ.ಬಿ.ಆರ್. ಅಂಬೇಡ್ಕರ್‌ ನೇತೃತ್ವದಲ್ಲಿ ಸಂವಿಧಾನ ರಚಿಸಿ, ಜಾರಿಗೊಳಿಸಲಾಯಿತು. ಅಂದಿನ ಪ್ರಧಾನಿ ಮುಂದಾಳತ್ವದಲ್ಲಿ ಪಂಚವಾರ್ಷಿಕ ಯೋಜನೆಗಳಿಂದಾಗಿ ಕೃಷಿ, ಕೈಗಾರಿಕೆ, ನೀರಾವರಿ, ಶಿಕ್ಷಣ ಮೊದಲಾದ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿತು’ ಎಂದರು.

ADVERTISEMENT

‘ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ವಿದ್ಯಾರ್ಥಿಗಳನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ತಿಳಿಸಿದರು.

ಪ್ರೊ.ಜಗದೀಶ ಗಸ್ತಿ ಸ್ವಾಗತಿಸಿದರು.ಡಾ.ಮಲ್ಲೇಶ ದೊಡ್ಡಲಕ್ಕಣ್ಣವರ ನಿರೂಪಿದರು. ಉಪ ಪ್ರಾಚಾರ್ಯ ಪ್ರೊ.ಅನಿಲ ರಾಮದುರ್ಗ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.