ADVERTISEMENT

ಹರ್ ಘರ್ ತಿರಂಗ ಅಭಿಯಾನ: ಬೈಲಹೊಂಗಲದಲ್ಲಿ ತ್ರಿವರ್ಣ ಧ್ವಜದ ಬೃಹತ್ ಯಾತ್ರೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 6:46 IST
Last Updated 11 ಆಗಸ್ಟ್ 2022, 6:46 IST
ತ್ರಿವರ್ಣ ಧ್ವಜದ ಬೃಹತ್ ಯಾತ್ರೆ
ತ್ರಿವರ್ಣ ಧ್ವಜದ ಬೃಹತ್ ಯಾತ್ರೆ   

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದಲ್ಲಿ ಗಣಾಚಾರಿ ಶಿಕ್ಷಣ ಸಂಸ್ಥೆ ಹಾಗೂ ಅಖಿಲ ಕರ್ನಾಟಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಸಮಿತಿ, ಎಬಿವಿಪಿ ಆಶ್ರಯದಲ್ಲಿ ಗುರುವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ತ್ರಿವರ್ಣ ಧ್ವಜದ ಬೃಹತ್ ಯಾತ್ರೆ ಗಮನ ಸೆಳೆಯಿತು.

ರಾಣಿ ಚನ್ನಮ್ಮನ ಸಮಾಧಿ ಸ್ಥಳದಿಂದ ಆರಂಭವಾದ ತಿರಂಗಾ ಯಾತ್ರೆಗೆ ಶಾಖಾ ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ ಚಾಲನೆ ನೀಡಿದರು. ಬಟ್ಟನ್ ಕೂಟ, ಮಾರುತಿ ದೇವಸ್ಥಾನ, ಇಂಚಲ‌ ಕ್ರಾಸ್‌, ಬಸ್ ನಿಲ್ದಾಣ, ರಾಯಣ್ಣ ವೃತ್ತ ಮಾರ್ಗವಾಗಿ ಗಣಾಚಾರಿ ಶಿಕ್ಷಣ ಸಂಸ್ಥೆಗೆ ಬಂದು ತಲುಪಿತು. ದಾರಿಯುದ್ದಕ್ಕೂ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜೈ ಘೋಷ ಮೊಳಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT