ADVERTISEMENT

ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 11:15 IST
Last Updated 7 ಆಗಸ್ಟ್ 2020, 11:15 IST

ಬೆಳಗಾವಿ: ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಬೀಳುತ್ತಿರುವುದರಿಂದ ಹಿಡಕಲ್‌ (ಘಟಪ್ರಭಾ) ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಇದೆ. ಇದರಿಂದಾಗಿ ಜಲಾಶಯವು ಆ.8ಕ್ಕೆ ಶೇ 80ರಷ್ಟು ಭರ್ತಿಯಾಗುವ ಸಾಧ್ಯತೆ ಇದೆ.

‘ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಜಲಾಶಯದಿಂದ ಕ್ರಸ್ಟ್ ಗೇಟ್‌ಗಳ ಮೂಲಕ ಘಟಪ್ರಭಾ ನದಿಗೆ ಯಾವ ಕ್ಷಣದಲ್ಲಾದರೂ ನೀರು ಬಿಡುಗಡೆ ಮಾಡಬಹುದಾಗಿದೆ. ಹೀಗಾಗಿ, ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿ ದಡದಲ್ಲಿ ಬರುವ ಎಲ್ಲ ಗ್ರಾಮಗಳ ಜನರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT