ADVERTISEMENT

ಕುಂತಿನಾಥ ಕಲಮನಿಗೆ ಪುರಸ್ಕಾರ ಪ್ರದಾನ

​ಪ್ರಜಾವಾಣಿ ವಾರ್ತೆ
Published 18 ಮೇ 2022, 9:43 IST
Last Updated 18 ಮೇ 2022, 9:43 IST
ಬೆಳಗಾವಿಯ ‘ಹಳ್ಳಿಯ ಸಂದೇಶ’ ಕನ್ನಡ ದಿನಪತ್ರಿಕೆಯ ಸಂಪಾದಕ ಕುಂತಿನಾಥ ಕಲಮನಿ ಅವರಿಗೆ ದಕ್ಷಿಣ ಭಾರತ ಜೈನ ಸಭೆಯ ವತಿಯಿಂದ ‘ಪ್ರಭಾತಕಾರ ವಾ.ರಾ. ಕೋಠಾರಿ ಆದರ್ಶ ಪತ್ರಕರ್ತ‘ ಪುರಸ್ಕಾರವನ್ನು ಈಚೆಗೆ ಪ್ರದಾನ ಮಾಡಿದರು
ಬೆಳಗಾವಿಯ ‘ಹಳ್ಳಿಯ ಸಂದೇಶ’ ಕನ್ನಡ ದಿನಪತ್ರಿಕೆಯ ಸಂಪಾದಕ ಕುಂತಿನಾಥ ಕಲಮನಿ ಅವರಿಗೆ ದಕ್ಷಿಣ ಭಾರತ ಜೈನ ಸಭೆಯ ವತಿಯಿಂದ ‘ಪ್ರಭಾತಕಾರ ವಾ.ರಾ. ಕೋಠಾರಿ ಆದರ್ಶ ಪತ್ರಕರ್ತ‘ ಪುರಸ್ಕಾರವನ್ನು ಈಚೆಗೆ ಪ್ರದಾನ ಮಾಡಿದರು   

ಬೆಳಗಾವಿ: ನಗರದ ‘ಹಳ್ಳಿಯ ಸಂದೇಶ’ ಕನ್ನಡ ದಿನಪತ್ರಿಕೆಯ ಸಂಪಾದಕ ಕುಂತಿನಾಥ ಕಲಮನಿ ಅವರಿಗೆ ದಕ್ಷಿಣ ಭಾರತ ಜೈನ ಸಭೆಯ ವತಿಯಿಂದ ನೀಡಲಾಗುವ ‘ಪ್ರಭಾತಕಾರ ವಾ.ರಾ. ಕೋಠಾರಿ ಆದರ್ಶ ಪತ್ರಕರ್ತ‘ ಪುರಸ್ಕಾರವನ್ನು ಈಚೆಗೆ ಪ್ರದಾನ ಮಾಡಲಾಯಿತು.

ಮಹಾರಾಷ್ಟ್ರದ ಸಾಂಗಲಿ ಪಟ್ಟಣದಲ್ಲಿ ನಡೆದ ದಕ್ಷಿಣ ಭಾರತ ಜೈನ ಸಭೆಯ ತ್ರೈವಾರ್ಷಿಕ ಮಹಾ ಅಧಿವೇಶನದ ಶತಮಾನೋತ್ಸವದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

23 ವರ್ಷಗಳಿಂದ ಸಲ್ಲಿಸಿದ ಸೇವೆ ಹಾಗೂ ಜೈನ ಸಮಾಜದಲ್ಲಿನ ಕಾರ್ಯಕ್ರಮಗಳ ಯಶಸ್ಸಿಗೆ ಶ್ರಮಿಸಿ ಸಮಾಜ ಸೇವೆ ಕೈಗೊಂಡಿದ್ದನ್ನು ಗುರುತಿಸಿ ಜೈನ ಸಭೆಯು ಪುರಸ್ಕಾರ ನೀಡಿದೆ.

ADVERTISEMENT

ಮಹಾರಾಷ್ಟ್ರದ ಆರೋಗ್ಯ ಸಚಿವ ಹಾಗೂ ಶತಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಡಾ.ರಾಜೇಂದ್ರ ಶಾ.ಪಾಟೀಲ ಯಡ್ರಾವಕರ, ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷ ರಾವಸಾಹೇಬ ಪಾಟೀಲ, ಆರ್.ಎ. ಪಾಟೀಲ, ಡಾ.ಅಜಿತ ಪಾಟೀಲ, ಬಾಲಚಂದ್ರ ಪಾಟೀಲ, ದತ್ತ ಡೋರ್ಲೆ, ಸುರೇಶ ಪಾಟೀಲ, ಜಿ.ಜಿ. ಲೋಬೋಗೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.