ADVERTISEMENT

ಮೈತ್ರಿ ಸುಳಿವು ನೀಡಿದ ಗಾಲಿ ಜನಾರ್ದನ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2023, 16:50 IST
Last Updated 11 ಫೆಬ್ರುವರಿ 2023, 16:50 IST
 ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ   

ರಾಮದುರ್ಗ (ಬೆಳಗಾವಿ ಜಿಲ್ಲೆ): ‘ಚುನಾವಣೆ ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೇರುತ್ತೇನೆ. ಇಲ್ಲದಿದ್ದರೆ ಅಧಿಕಾರಕ್ಕೆ ಬರುವವರ ಕೈ ಹಿಡಿದಾದರೂ ಅಧಿಕಾರ ಮಾಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಶನಿವಾರ ಹೇಳಿದರು.

ಇಲ್ಲಿ ರೆಡ್ಡಿ ಸಮಾಜ ಹಮ್ಮಿಕೊಂಡಿದ್ದ ವೇಮನರ 611ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿದ ಅವರು, ‘ನನ್ನ ಕೈ ಯಾರು ಹಿಡಿಯುತ್ತಾರೆ, ನಾನು ಯಾರ ಕೈಹಿಡಿಯುತ್ತೇನೆ ಎನ್ನುವುದು ಚುನಾವಣೆ ಬಳಿಕ ಗೊತ್ತಾಗಲಿದೆ‘ ಎನ್ನುವ ಮೂಲಕ ಮೈತ್ರಿಯ ಸುಳಿವು ನೀಡಿದರು. ನೀಡಿದ್ದಾರೆ.

‘ಕಲ್ಯಾಣ ಕರ್ನಾಟಕದ 13 ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವಿದೆ. ಅಧಿಕಾರ ಹಿಡಿಯುವ ಸಾಮರ್ಥ್ಯ ಹೊಂದಿದೆ. ಅದಕ್ಕಾಗಿ ಸಮಾಜದ ಸಂಘಟನೆ ನಡೆಯುತ್ತಿದೆ‘ ಎಂದು ಹೇಳಿದರು. ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.