ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಕೆಎಲ್ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.
ಶುಕ್ರವಾರ ನಗರದ ಕೆಎಲ್ ಐಟಿಐ ಕಾಲೇಜಿನಲ್ಲಿ ಬೆಂಗಳೂರಿನ ಇಂಪ್ಯಾಕ್ಟ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಹಿಟಾಚಿ ಮತ್ತು ಇನಕ್ಯಾಫ್ ತುಮಕೂರು ಆಶ್ರಯದೊಂದಿಗೆ ಐಟಿಐ ಪಾಸಾದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳನ್ನು ಸಂಸ್ಥೆ ಕಲ್ಪಿಸುತ್ತಿರುವ ಅವಕಾಶ ಸದುಪಯೋಗ ಪಡೆಸಿಕೊಂಡು ಇಂದಿನ ಸ್ವರ್ಧಾತ್ಮಕ ತಾಂತ್ರಿಕ ಯುಗಕ್ಕೆ ಸಿದ್ಧ್ದರಾಗಬೇಕು. ತಮ್ಮಲ್ಲಿರುವ ಕೌಶಲ ವೃದ್ಧಿಸಿಕೊಂಡು ಉದ್ಯೋಗಿಗಳಾಗಿ ತಮ್ಮ ಬದುಕು ರೂಪಿಕೊಳ್ಳುವಂತೆ ಸಲಹೆ ನೀಡಿದರು.
ಮೇಳದಲ್ಲಿ 90 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಂಪೆನಿಗಳ ಎಚ್.ಆರ್.ಗಳಾದ ಜಗದೀಶ್ವರ ಹಾಗೂ ಮುನು ಕೆ.ಜಿ., ಪ್ರಾಚಾರ್ಯ ಪದ್ಮಭೂಷಣ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.