ADVERTISEMENT

ಗಡಿ ನಾಡಿನಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 4:01 IST
Last Updated 1 ನವೆಂಬರ್ 2021, 4:01 IST
   

ಬೆಳಗಾವಿ: ಜಿಲ್ಲಾಡಳಿತದಿಂದ ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ,‌ ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ.‌ ದರ್ಶನ್, ಎಸ್ಪಿ ಲಕ್ಷ್ಮಣ ‌ನಿಂಬರಗಿ,‌ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಭಾಗವಹಿಸಿದ್ದರು.

ADVERTISEMENT

ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಉಪಸ್ಥಿತರಿದ್ದರು.

ಖ್ಯಾತ ಚಲನಚಿತ್ರ ನಟ ಪುನೀತ್ ರಾಜ್‍ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.