ADVERTISEMENT

ಅಥಣಿ |ಕನ್ನಡ ಭಾಷೆ ಮೆರೆಯದಿರಿ: ಉದ್ಯಮಿ ಶಿವಕುಮಾರ ಸವದಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2023, 7:04 IST
Last Updated 4 ಅಕ್ಟೋಬರ್ 2023, 7:04 IST
ಅಥಣಿಯಲ್ಲಿ ಬೆಳಗಾವಿ ಜಿಲ್ಲಾ ಸಿ.ಬಿ.ಎಸ್.ಇ. ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಕನ್ನಡ ಶಿಕ್ಷಕರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಕರುನಾಡು ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು
ಅಥಣಿಯಲ್ಲಿ ಬೆಳಗಾವಿ ಜಿಲ್ಲಾ ಸಿ.ಬಿ.ಎಸ್.ಇ. ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಕನ್ನಡ ಶಿಕ್ಷಕರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಕರುನಾಡು ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಅಥಣಿ: ‘ಯಾವುದೇ ಮಾಧ್ಯಮದಲ್ಲಿ ಶಿಕ್ಷಣ ಕಲಿತರೂ ಕನ್ನಡ ಭಾಷೆಯನ್ನು ಮೆರೆಯಬಾರದು. ನಮ್ಮ ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸ ತಿಳಿದುಕೊಳ್ಳಲು ಕನ್ನಡ ಮುಖ್ಯವಾಗಿದೆ’ ಉದ್ಯಮಿ ಶಿವಕುಮಾರ ಸವದಿ ಹೇಳಿದರು.

ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಸಿ.ಬಿ.ಎಸ್.ಇ. ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಕನ್ನಡ ಶಿಕ್ಷಕರ ಸಂಘವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು.

ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಜಿ. ವಂಟಿಗೋಡಿ, ‘ಮಕ್ಕಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಜವಾಬ್ದಾರಿ ಕನ್ನಡ ಶಿಕ್ಷಕರ ಮೇಲಿದೆ’ ಎಂದರು.

ADVERTISEMENT

ಪ್ರಾಚಾರ್ಯ ಸತೀಶ ಹಿರಮೇಠ ಮಾತನಾಡಿದರು. ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಕೋರಿ, 
ಮಹೇಶ ಶಿರಸಂಗಿ, ಸಂತೋಷ ಹುಬಳ್ಳಿ, ಈರಣ್ಣಾ ಅಂಬಲಿ, ಸೂರ್ಯಕಾಂತ ಮಗದುಮ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.