ADVERTISEMENT

ಕರ್ನಾಟಕ– ಮಹಾರಾಷ್ಟ್ರ ‘ಸಮನ್ವಯ’ ಸಭೆ | ಕೊಲ್ಹಾಪುರ ತಲುಪಿದ ರಾಜ್ಯಪಾಲ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2022, 8:12 IST
Last Updated 4 ನವೆಂಬರ್ 2022, 8:12 IST
ಕರ್ನಾಟಕ– ಮಹಾರಾಷ್ಟ್ರ ಸಮನ್ವಯ ಸಭೆಗಾಗಿ ಶುಕ್ರವಾರ ಕೊಲ್ಹಾಪುರಕ್ಕೆ ಬಂದ ರಾಜ್ಯಪಾಲ ಥಾವರಚಂದ ಗೆಹಲೋತ್‌ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್ ಕೊಶಿಯಾರಿ ಹೂಗುಚ್ಛ ನೀಡಿ ಸ್ವಾಗತಿಸಿದರು.
ಕರ್ನಾಟಕ– ಮಹಾರಾಷ್ಟ್ರ ಸಮನ್ವಯ ಸಭೆಗಾಗಿ ಶುಕ್ರವಾರ ಕೊಲ್ಹಾಪುರಕ್ಕೆ ಬಂದ ರಾಜ್ಯಪಾಲ ಥಾವರಚಂದ ಗೆಹಲೋತ್‌ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್ ಕೊಶಿಯಾರಿ ಹೂಗುಚ್ಛ ನೀಡಿ ಸ್ವಾಗತಿಸಿದರು.   

ಬೆಳಗಾವಿ: ಕರ್ನಾಟಕ– ಮಹಾರಾಷ್ಟ್ರ ಗಡಿ ಭಾಗದ ಜನಜೀವನ ಸುಧಾರಣೆ ಹಾಗೂ ಮೂಲ ಸಮಸ್ಯೆಗಳ ನಿವಾರಣೆಗೆ ಚರ್ಚಿಸಲು, ಶುಕ್ರವಾರ ಆಯೋಜಿಸಿದ ‘ಸಮನ್ವಯ’ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಕೊಲ್ಹಾಪುರ ತಲುಪಿದರು.

ಗೆಹಲೋತ್‌ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಬರಮಾಡಿಕೊಂಡರು. ನಂತರ ಅವರು ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಗೆಹಲೋತ್‌ ದಂಪತಿಯನ್ನು ಸನ್ಮಾನಿಸಲಾಯಿತು.

ಈ ಸಭೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕೂಡ ಪಾಲ್ಗೊಂಡಿದ್ದಾರೆ. ಗಡಿ ವಿವಾದದ ಹೊರತಾಗಿ ಈ ಭಾಗದ ಕುಡಿಯುವ ನೀರು, ನೀರಾವರಿ, ರಸ್ತೆ, ಶೈಕ್ಷಣಿಕ ಸಮಸ್ಯೆಗಳ ಚರ್ಚೆ, ಅಪರಾಧ ಕೃತ್ಯಗಳ ನಿಯಂತ್ರಣ ಸಂಬಂಧ ಚರ್ಚೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.