ADVERTISEMENT

ಬೆಳಗಾವಿ ಪ್ರವೇಶಕ್ಕೆ ಯತ್ನಿಸಿದ ಮಹಾರಾಷ್ಟ್ರದ ಕಾರ್ಯಕರ್ತರಿಗೆ ತಡೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2022, 7:32 IST
Last Updated 19 ಡಿಸೆಂಬರ್ 2022, 7:32 IST
   

ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು ಸೋಮವಾರ ತಡೆದಿದ್ದಾರೆ.

ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು. ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ‌.

ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.