ಬೆಳಗಾವಿ: ಮಹಾರಾಷ್ಟ್ರ ಸರ್ಕಾರಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಎರಡು ತಿಂಗಳಿಂದಲೂ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ಗಳ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಬೆಳಗಾವಿ ಗಲಾಟೆಗೂ- ಬಸ್ ಸಂಚಾರ ಸ್ಥಗಿತಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ವೈ. ನಾಯಕ ತಿಳಿಸಿದರು.
ಮಹಾರಾಷ್ಟ್ರ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಸಾರಿಗೆ ಬಸ್ಗಳು ಕರ್ನಾಟಕಕ್ಕೆ ಕಾರ್ಯಾಚರಿಸುತ್ತಿಲ್ಲ. ಕರ್ನಾಟಕದ ಬಸ್ಗಳಿಗೂ ಮಹಾರಾಷ್ಟ್ರಕ್ಕೆ ಪ್ರವೇಶ ಕೊಡುತ್ತಿಲ್ಲ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಸಾರಿಗೆ ನೌಕರರ ಮುಷ್ಕರ ಮುಗಿದರೆ ಬಸ್ ಸಂಚಾರ ಪುನರಾರಂಭವಾಗಲಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.