ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಗೆ ಕಚೇರಿ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮುಖಾಮುಖಿಯಾದರು.
ಶಾಸಕ ಸತೀಶ ಜಾರಕಿಹೊಳಿ ಮತ ಚಲಾಯಿಸಲು ಪಾಲಿಕೆ ಕಚೇರಿ ಆವರಣದಲ್ಲಿ ನಿಂತಿದ್ದರು. ಇದೇ ವೇಳೆ, ಕವಟಗಿಮಠ ಕುಟುಂಬ ಸಮೇತರಾಗಿ ಆಗಮಿಸಿದರು. ಈ ವೇಳೆ ಪರಸ್ಪರರು ಉಭಯ ಕುಶಲೋಪರಿ ವಿಚಾರಿಸಿದರು.
ಚುನಾವಣೆಯ ಲೈವ್ ಅಪ್ಡೇಟ್ಸ್:ವಿಧಾನ ಪರಿಷತ್ ಚುನಾವಣೆ 2021 Live: 90 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುತ್ತಿರುವ ಮತದಾರರು Live
ಮತ ಚಲಾಯಿಸಿ ಬಂದ್ರಾ ಎಂದು ಕವಟಗಿಮಠ ವಿಚಾರಿಸಿದರು.
ಆಗ, ನಮ್ಮ ಮೇಡಂ(ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್) ಬರಬೇಕು ಎಂದು ಸತೀಶ ಜಾರಕಿಹೊಳಿ ತಿಳಿಸಿದರು.
ಬಳಿಕ ಮತದಾನಕ್ಕಾಗಿ ಕವಟಗಿಮಠ ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.