ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಚನ್ನರಾಜ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಕಿರಿಯ ಸಹೋದರ.
ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನರಾಜ, ‘ಕ್ಷೇತ್ರದಲ್ಲಿ ತಂಡದ ಕೆಲಸ ನಡೆದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಳಕರ ಅವರು ಜೊತೆಯಾಗಿ ನಡೆಸಿದ ಪ್ರಚಾರವನ್ನು ಜನರು ಒಪ್ಪಿದ್ದಾರೆ’ ಎಂದು ಹೇಳಿದರು.
ಸತೀಶ ಜಾರಕಿಹೊಳಿ ಪಕ್ಷ ನಿಷ್ಠೆ ಮೆರೆದಿದ್ದಾರೆ. ಜನರು ಬದಲಾವಣೆ ಬಯಸಿರುವುದು ಫಲಿತಾಂಶ ತೋರಿಸಿದೆ. ಲಕ್ಷ್ಮಿ ಫೈಟರ್. ಅವರು ನನ್ನ ದೇವರು ಎಂದು ಹೇಳಿದರು.
ಇದನ್ನೂ ಓದಿ... ವಿಧಾನ ಪರಿಷತ್ ಚುನಾವಣೆ| ಇಲ್ಲಿದೆ ಗೆದ್ದವರ ಪಟ್ಟಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.