ADVERTISEMENT

ಕಾಲೆಳೆಯುವುದು ನಿಂತರೆ ಕಾಂಗ್ರೆಸ್‌ಗೆ ಮತ್ತೆ ಅಧಿಕಾರ: ಪ್ರಕಾಶ ಹುಕ್ಕೇರಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 12:34 IST
Last Updated 16 ಜುಲೈ 2021, 12:34 IST
ಪ್ರಕಾಶ ಹುಕ್ಕೇರಿ
ಪ್ರಕಾಶ ಹುಕ್ಕೇರಿ   

ಬೆಳಗಾವಿ: ‘ರಾಜ್ಯದಲ್ಲಿ ಲಿಂಗಾಯತರೆಲ್ಲರೂ ಒಂದಾದರೆ ಮತ್ತು ಪಕ್ಷದಲ್ಲಿರುವವರು ಒಬ್ಬರ ಕಾಲನ್ನು ಮತ್ತೊಬ್ಬರು ಎಳೆಯುವುದನ್ನು ನಿಲ್ಲಿಸಿ ಚುನಾವಣೆಗೆ ಒಗ್ಗಟ್ಟಾಗಿ ಹೋದರೆ ಮುಂದಿನ ಬಾರಿ (2023ಕ್ಕೆ) ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ’ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಹೇಳಿದರು.

ಇಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ದೊಡ್ಡವನು, ನೀನು ದೊಡ್ಡವನು ಎನ್ನುವುದು, ಕಾಲೆಳೆಯುವುದು ನಮ್ಮೊಳಗೆಯೇ ನಡೆದಿದೆ. ಇದು ನಿಲ್ಲಬೇಕು. ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ನಮ್ಮ ಪಕ್ಷದವರೇ ಸೋಲಿಸುವ ಕೆಲಸ ಮಾಡುತ್ತಾರೆ. ಅದು ನಡೆಯಬಾರದು’ ಎಂದರು.

‘ನಾನು ನನ್ನ ಅನುಭವದ ಮಾತುಗಳನ್ನು ಹೇಳುತ್ತಿದ್ದೇನೆ’ ಎಂದುತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.