ಬೆಳಗಾವಿ: ನಗರದ ರಾಮಲಿಂಗಖಿಂಡ್ ಗಲ್ಲಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಮುಖಂಡರು ಹಾಗೂ ಶಿವಸೇನಾ ಮುಖಂಡರ ನಡುವೆ ಶುಕ್ರವಾರವಾಗ್ವಾದ ನಡೆದಿದೆ. ಈ ವೇಳೆಶಿವಸೇನಾ ಮುಖಂಡ ಪ್ರಕಾಶ ಶಿರೋಳಕರ ಅವರ ಕಾರಿನ ಮುಂಭಾಗದಲ್ಲಿದ್ದ ಮರಾಠಿ ಬೋರ್ಡ್ ಹಾಗೂ ನಂಬರ್ ಪ್ಲೇಟ್ ಅನ್ನು ಕರವೇ ಕಾರ್ಯಕರ್ತರು ಕಿತ್ತು ಹಾಕಿದ್ದಾರೆ.
ಕರವೇ ಕಾರ್ಯಕರ್ತರುರಾಜ್ಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ತೆರಳಿದ್ದರು. ಈ ವೇಳೆಎರಡೂ ಸಂಘಟನೆಗಳ ಮುಖಂಡರ ನಡುವೆ ವಾಗ್ವಾದ ನಡೆದಿದೆ.
ಉಭಯ ಸಂಘಟನೆಗಳ ಮುಖಂಡರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.