ಬೆಳಗಾವಿ: ‘ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಧ್ವನಿ ಎತ್ತುವಂತೆ ಒತ್ತಾಯಿಸಿ ಈ ಭಾಗದ ಸಚಿವರು, ಸಂಸದರು ಮತ್ತು ಶಾಸಕರಿಗೆ ಪತ್ರ ಕಳುಹಿಸುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.
‘ಪ್ರಮುಖ ಇಲಾಖೆಗಳ ಕಾರ್ಯದರ್ಶಿಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿ, ಸುವರ್ಣ ವಿಧಾನಸೌಧವನ್ನು ಆಡಳಿತ ಕೇಂದ್ರವಾಗಿ ಮಾಡಬೇಕು ಎಂಬ ಬೇಡಿಕೆ ನನೆಗುದಿಗೆ ಬಿದ್ದಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ 55 ಶಾಸಕರಿದ್ದು, ಪ್ರತ್ಯೇಕ ತಂಡಗಳ ಮೂಲಕ ಭೇಟಿಯಾಗುತ್ತೇವೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.