ADVERTISEMENT

ಸ್ವಚ್ಛತೆಗೆ ಒತ್ತು ನೀಡಿ: ಪಿಂಗಟ್‌

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2022, 16:08 IST
Last Updated 11 ಅಕ್ಟೋಬರ್ 2022, 16:08 IST
ಬೆಳಗಾವಿಯಲ್ಲಿ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಯಿತು
ಬೆಳಗಾವಿಯಲ್ಲಿ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಯಿತು   

ಬೆಳಗಾವಿ: ‘ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಆರೋಗ್ಯಕರ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಡಾ.ಅಮಿತ್‌ ಪಿಂಗಟ್‌ ಹೇಳಿದರು.

ನಗರದಲ್ಲಿ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಹಾಗೂ ವಡಗಾವಿಯ ನೇಕಾರ ಕಾಲನಿಯ ಸಾಯಿ ಸೇವಾ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ಸದಸ್ಯ ಸಂತೋಷ ಟೋಪಗಿ, ಡಾ.ವೀರೇಂದ್ರ ಅಷ್ಟಗಿ, ಡಾ.ಯೋಗೇಶ ರಾವಳ, ಸಂತೋಷ ಇತಾಪೆ ಇದ್ದರು. ಶಿಬಿರದಲ್ಲಿ 250ಕ್ಕೂ ಅಧಿಕ ಜನರ ತಪಾಸಣೆ ನಡೆಸಿ, ಔಷಧಗಳನ್ನು ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.