ADVERTISEMENT

ಅಶೋಕ ಬಾಗೇವಾಡಿ ನಿಧನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 17:13 IST
Last Updated 6 ಸೆಪ್ಟೆಂಬರ್ 2019, 17:13 IST
ಅಶೋಕ ಬಾಗೇವಾಡಿ
ಅಶೋಕ ಬಾಗೇವಾಡಿ   

ಬೆಳಗಾವಿ: ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಉಪ– ಕಾರ್ಯಾಧ್ಯಕ್ಷ ಅಶೋಕ ಬಾಗೇವಾಡಿ (74) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ.

1945ರ ಮಾರ್ಚ್‌ 22ರಂದು ನಿಪ್ಪಾಣಿಯಲ್ಲಿ ಜನಿಸಿದ್ದ ಅವರು, ಬಿ.ಕಾಂ ಪದವಿ ಪಡೆದಿದ್ದರು. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಪ್ರದೇಶದಲ್ಲಿ ಕನ್ನಡದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದರು. 1975ರಲ್ಲಿ ಕೆಎಲ್‌ಇ ಸಂಸ್ಥೆಯ ಆಡಳಿತ ಸದಸ್ಯರಾಗಿ ಆಯ್ಕೆಯಾಗಿದ್ದರು. ಸಂಸ್ಥೆಯು ಆರಂಭಿಸಿದ್ದ ಹಲವು ಶಿಕ್ಷಣ ಕೇಂದ್ರಗಳಲ್ಲಿ ಇವರ ಕೊಡುಗೆ ಸಾಕಷ್ಟಿತ್ತು. 2001ರಿಂದ ಸಂಸ್ಥೆಯ ಉಪ– ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ನಿಪ್ಪಾಣಿಯ ಅವರ ಹೊಲದಲ್ಲಿ ರಾತ್ರಿ ಅಂತ್ಯಸಂಸ್ಕಾರ ನಡೆಯಿತು. ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಅಧ್ಯಕ್ಷ ಶಿವಾನಂದ ಕೌಜಲಗಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.