ADVERTISEMENT

ಕೆಎಂಎಫ್‌ ಚುನಾವಣೆ: ಸದಸ್ಯನ ಅಪಹರಣ!

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2019, 15:46 IST
Last Updated 26 ಏಪ್ರಿಲ್ 2019, 15:46 IST

ಬೆಳಗಾವಿ: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ತನಗೆ ಮತ ಚಲಾಯಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಬೆನ್ನಾಳ ಗ್ರಾಮದ ಸಾತೇರಿ ಬೈರು ಆನಂದಾಚೆ ಎಂಬುವವರನ್ನು ಅಭ್ಯರ್ಥಿ ಕಲ್ಲಪ್ಪ ನಿಂಗಪ್ಪ ಗಿರಿಯಣ್ಣವರ ಅಪಹರಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಕಳೆದ 21ರಂದು ಬೆಂಬಳಗಾ ಗ್ರಾಮದ ಕಲ್ಲಪ್ಪ ನಿಂಗಪ್ಪ ಗಿರಿಯಣ್ಣವರ ಅವರು ಸಾತೇರಿ ಅವರನ್ನು ಅಪಹರಿಸಿದ್ದಾರೆ ಎಂದು ಕುಟುಂಬಸ್ಥರು ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಾತೇರಿ ಅವರು ಬೆನ್ನಾಳ ಗ್ರಾಮದ ಹಾಲು ಒಕ್ಕೂಟದ ಸದಸ್ಯರಾಗಿದ್ದಾರೆ. ಇದೇ ಭಾನುವಾರ (ಏ.28) ಒಕ್ಕೂಟದ 7 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಲ್ಲಪ್ಪ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.