ADVERTISEMENT

ಕೆಪಿಟಿಸಿಎಲ್‌: ಮತ್ತೆ ಆರು ಅಭ್ಯರ್ಥಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2022, 15:47 IST
Last Updated 20 ಅಕ್ಟೋಬರ್ 2022, 15:47 IST
   

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಮತ್ತೆ ಆರು ಅಭ್ಯರ್ಥಿಗಳನ್ನು ಗುರುವಾರ ಬಂಧಿಸಲಾಗಿದೆ. ಇದರೊಂದಿಗೆ ಆರೋಪಿಗಳ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಗೋಕಾಕ ತಾಲ್ಲೂಕಿನ ಬಗರನಾಳದ ಈರಣ್ಣ ಮಲ್ಲಪ್ಪ ಬಂಕಾಪುರ (26), ಶಿವಾನಂದ ರಾಮಪ್ಪ ಕುಮೋಜಿ (22), ರಾಮದುರ್ಗ ತಾಲ್ಲೂಕಿನ ಬಟಕುರ್ಕಿಯ ಆದಿಲ್‌ಶಾ ಸಿಖಂದರ್‌ ತಾಸೇವಾಲೆ (23), ಮೂಲಗಿ ತಾಲ್ಲೂಕಿನ ಖಾನಟ್ಟಿಯ ಮಹಾಂತೇಶ ಹಣಮಂತ ಹೊಸ ಉಪ್ಪಾರ (22) ನಾಗನೂರು ಗ್ರಾಮದ ಮಹಾಲಿಂಗ ಭೀಮಪ್ಪ ಕುರಿ (30), ಸವದತ್ತಿ ತಾಲ್ಲೂಕಿನ ಮೆಳ್ಳಿಕೇರಿಯ ಸುಂದರ ಶಿವಾನಂದ ಬಾಳಿಕಾಯಿ (23) ಬಂಧಿತರು.

ಇವರೆಲ್ಲರೂ ಸ್ಮಾರ್ಟ್‌ವಾಚ್‌, ಮೈಕ್ರೊ ಚಿಪ್‌ ಸೇರಿದಂತೆ ಇತರ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಪರೀಕ್ಷೆ ಕೇಂದ್ರದೊಳಗೆ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ. ಅಕ್ರಮಕ್ಕೆ ಬಳಸಿದ ಉಪಕರಣಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ADVERTISEMENT

ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ 19 ಆರೋಪಿಗಳಿಗೆ ಅ.17ರಂದು ಜಾಮೀನು ಸಿಕ್ಕಿದೆ. ಪ್ರಮುಖ ಆರೋಪಿ ಸಂಜು ಲಕ್ಷ್ಮಣ ಭಂಡಾರಿಯನ್ನು ಸಿಐಡಿ ಕಸ್ಟಡಿಗೆ ನೀಡಲಾಗಿದೆ. ಅ.18ರಂದು ಇಬ್ಬರು ಹಾಗೂ 19ರಂದು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.