ADVERTISEMENT

ಕೃಷ್ಣೆಗೆ ಸೇರುವ ನೀರಿನ ಪ್ರಮಾಣ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 9:33 IST
Last Updated 17 ಅಕ್ಟೋಬರ್ 2020, 9:33 IST
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಪಂಚಗಂಗಾ ಮತ್ತು ಕೃಷ್ಣಾ ನದಿಗಳ ಸಂಗಮ ಸ್ಥಳದಲ್ಲಿರುವ ನರಸಿಂಹವಾಡಿಯ ದತ್ತ ಮಂದಿರ ಸಂಪೂರ್ಣ ಮುಳುಗಿದೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಪಂಚಗಂಗಾ ಮತ್ತು ಕೃಷ್ಣಾ ನದಿಗಳ ಸಂಗಮ ಸ್ಥಳದಲ್ಲಿರುವ ನರಸಿಂಹವಾಡಿಯ ದತ್ತ ಮಂದಿರ ಸಂಪೂರ್ಣ ಮುಳುಗಿದೆ   

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದ ಘಟ್ಟ‌ ಪ್ರದೇಶದಲ್ಲಿ ಮತ್ತು ಚಿಕ್ಕೋಡಿ ತಾಲ್ಲೂಕಿನಲ್ಲಿ ಮಳೆ ಕ್ಷೀಣಿಸಿದೆ. ಆದರೂ, ಕೃಷ್ಣಾ ಮತ್ತು ಉಪನದಿಗಳಿಗೆ ಸೇರುವ ನೀರಿನ ಪ್ರಮಾಣ 24 ಗಂಟೆಗಳಲ್ಲಿ 10ಸಾವಿರ ಕ್ಯುಸೆಕ್‌ ಹೆಚ್ಚಳವಾಗಿದೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.15 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 14ಸಾವಿರ ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.29 ಲಕ್ಷ ಕ್ಯುಸೆಕ್ ನೀರು ಸೇರುತ್ತಿದೆ.

ಚಿಕ್ಕೋಡಿ ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಪಂಚಗಂಗಾ ಮತ್ತು ಕೃಷ್ಣಾ ನದಿಗಳ ಸಂಗಮ ಸ್ಥಳದಲ್ಲಿರುವ ನರಸಿಂಹವಾಡಿಯ ದತ್ತ ಮಂದಿರ ಸಂಪೂರ್ಣ ಮುಳುಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.