ಬೆಳಗಾವಿ: ರಾಷ್ಟ್ರೀಯ ಜೈನ ಪತ್ರಕಾರ ಮಹಾಸಂಘದ ಕರ್ನಾಟಕ ಪ್ರಾಂತ ಸಂಯೋಜಕರಾಗಿ ಇಲ್ಲಿನ ಪತ್ರಕರ್ತ ಕುಂತಿನಾಥ ಕಲಮನಿ ಅವರನ್ನು ನೇಮಕ ಮಾಡಲಾಗಿದೆ.
ರಾಷ್ಟ್ರ ಮಟ್ಟದಲ್ಲಿ ಜೈನ ಪತ್ರಕರ್ತರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿರುವ ಸಂಘ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದೆ. ಉತ್ತರ ಭಾರತದ ರಾಜ್ಯಗಳ ಜೊತೆಗೆ ಕರ್ನಾಟಕದಲ್ಲೂ ಸೇವೆ ನೀಡಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ನಡೆದ ಸಭೆಯಲ್ಲಿ ಕುಂತಿನಾಥ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ರಮೇಶ ಜೈನ ತಿಜಾರಿಯಾ ಹಾಗೂ ರಾಷ್ಟ್ರೀಯ ಮಹಾಮಂತ್ರಿ ಉದಯಬಾನ ಜೈನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.