ADVERTISEMENT

ಕೇಂದ್ರ, ರಾಜ್ಯ ಸರ್ಕಾರಕ್ಕೆ ತಕ್ಕ ಉತ್ತರ ಕೊಡಿ: ಲಕ್ಷ್ಮಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 13:07 IST
Last Updated 11 ಏಪ್ರಿಲ್ 2021, 13:07 IST
ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತುರಮರಿ ಗ್ರಾಮದಲ್ಲಿ ಭಾನುವಾರ ಪ್ರಚಾರ ನಡೆಸಿದರು
ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತುರಮರಿ ಗ್ರಾಮದಲ್ಲಿ ಭಾನುವಾರ ಪ್ರಚಾರ ನಡೆಸಿದರು   

ಬೆಳಗಾವಿ: ಗ್ರಾಮೀಣ ಕ್ಷೇತ್ರದ ತುರಮರಿ ಗ್ರಾಮದ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭಾನುವಾರ ಪ್ರಚಾರ ನಡೆಸಿದರು.

‘ಜನಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತೂ ಕಾಳಜಿ‌ ಇಲ್ಲ. ಪ್ರತಿಯೊಬ್ಬರೂ ಮತದ ಮೂಲಕ ಈ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು. ಒಳ್ಳೆಯ ದಿನಗಳು ಎನ್ನುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವುದರಲ್ಲಿ ನಿರತವಾಗಿವೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದ್ದು, ಬಡವರ‌ ಮೇಲೆ ಬರೆ ಎಳೆಯುತ್ತಿವೆ’ ಎಂದು ದೂರಿದರು.

‘ಬಡವರು, ಶ್ರಮಿಕರು ಹಾಗೂ ರೈತರ ಬಗ್ಗೆ ಈ ಸರ್ಕಾರಗಳಿಗೆ ಕಾಳಜಿ ಇಲ್ಲ. ಮೊದಲು ಬೆಲೆ ಏರಿಕೆ ನಿಯಂತ್ರಿಸಬೇಕು’ ಎಂದರು.

ADVERTISEMENT

‘ದೇಶದಲ್ಲಿ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.