ADVERTISEMENT

ಕೋವಿಡ್‌ ಹಿನ್ನೆಲೆ: 2 ಆಂಬುಲೆನ್ಸ್ ಸಮರ್ಪಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ,

​ಪ್ರಜಾವಾಣಿ ವಾರ್ತೆ
Published 12 ಮೇ 2021, 14:52 IST
Last Updated 12 ಮೇ 2021, 14:52 IST
ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಎರಡು ಆಂಬುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಬುಧವಾರ ಸಮರ್ಪಿಸಿದರು
ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಎರಡು ಆಂಬುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಬುಧವಾರ ಸಮರ್ಪಿಸಿದರು   

ಬೆಳಗಾವಿ: ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ದಿನವನ್ನೇ ತಮ್ಮ ಜನ್ಮ ದಿನವನ್ನಾಗಿ ಆಚರಿಸಿಕೊಳ್ಳುತ್ತಿರುವ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಈ ಸಂದರ್ಭದಲ್ಲಿ ಜನರ ಸೇವೆಗೋಸ್ಕರ ಎರಡು ಆಂಬುಲೆನ್ಸ್‌ಗಳನ್ನು ಬುಧವಾರ ಸಮರ್ಪಿಸಿದರು.

‘ಕೊರಿನಾದಿಂದಾಗಿ ಜನರು ಎಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುವ ಅರಿವಿದೆ. ನಾನು ಕೂಡ ಬಹಳಷ್ಟು ನೋವು ಅನುಭವಿಸಿದ್ದೇನೆ. ಆದಷ್ಟು ಬೇಗ ಇಂತಹ ಪರಿಸ್ಥಿತಿಯಿಂದ ಎಲ್ಲರೂ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರು ಪಕ್ಷಾತೀತವಾಗಿ ಈ ಎರಡು ಆಂಬುಲೆನ್ಸ್‌ಗಳನ್ನು ಬಳಸಿಕೊಳ್ಳಬೇಕು’ ಎಂದು ಕೋರಿದರು.

‘ಕ್ಷೇತ್ರದ ಜನರು ಹಾಸಿಗೆ, ಚುಚ್ಚುಮದ್ದು, ಆಮ್ಲಜನಕಕ್ಕಾಗಿ ಫೋನ್ ಮಾಡುತ್ತಿದ್ದಾರೆ. ಅವರ ಕಷ್ಟ ನನಗೆ ಅರ್ಥವಾಗುತ್ತದೆ. ನನ್ನ ಕೈಯಿಂದ ಸಾಧ್ಯವಾದಷ್ಟು ನೆರವು ನೀಡುತ್ತಿದ್ದೇನೆ. ಎಲ್ಲರೂ ಜಾಗೃತಿಯಿಂದ ಇರಬೇಕು’ ಎಂದು ಮನವಿ ಮಾಡಿದರು.

ADVERTISEMENT

ಸಿ.ಸಿ. ಪಾಟೀಲ, ರಾಮನಗೌಡ ಪಾಟೀಲ, ಶ್ರೀಕಾಂತ ಮಾದುಬರಬಣ್ಣವರ, ಬಸನಗೌಡ ಪಾಟೀಲ, ಶಾಮ ಮುತಗೇಕರ, ಬಾಗಣ್ಣ ನರೋಟಿ, ಗಜಾನನ ಕಣಬರ್ಕರ, ಜೈವಂತ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.