ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಮರಳುವುದು ಖಚಿತ’ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಪ್ರಚಾರ ಸಭೆಗಳನ್ನು ನಡೆಸಿ ಅವರು ಮಾತನಾಡಿದರು.
‘ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಟ್ಟಾ ಕಾಂಗ್ರೆಸ್ ಬೆಂಬಲಿಗರು. ಕಾರಣಾಂತರಗಳಿಂದ ಕೆಲವು ವರ್ಷ ಬಿಜೆಪಿ ಬೆಂಬಲಿಸಿರಬಹುದು. ಈಗ ಬಿಜೆಪಿಯ ಸುಳ್ಳು ಭರವಸೆಗಳು ಜನರಿಗೆ ಈಗ ಅರ್ಥವಾಗಿವೆ. ಮುಂದೆಯೂ ಅವರನ್ನು ಮೂರ್ಖರನ್ನಾಗಿಸಲು ಬಿಜೆಪಿಗೆ ಸಾಧ್ಯವಿಲ್ಲ. ಹಾಗಾಗಿ ಈ ಬಾರಿ ಕಾಂಗ್ರೆಸ್ ಪುಟಿದೇಳಲಿದೆ’ ಎಂದರು.
ಬೀರದೇವರ ಮಂದಿರಕ್ಕೆ ತೆರಳಿ ಆಶೀರ್ವಾದ ಪಡೆದರು.
ಮಾರಿಹಾಳದಲ್ಲಿ ಸತೀಶ ಜಾಹರಕಿಹೊಳಿ ಹಾಗೂ ಶಾಸಕಿ ಬಸವೇಶ್ವರ ಮತ್ತು ವಾಲ್ಮೀಕಿ ಸಮಾಜದ ನಾಮಫಲಕಕ್ಕೆ ಗೌರವ ಸಲ್ಲಿಸಿದರು. ಮೋದಗಾ, ಪಂತ ಬಾಳೇಕುಂದ್ರಿ ಮತ್ತು ಕೆ.ಕೆ. ಕೊಪ್ಪ ಗ್ರಾಮದಲ್ಲಿ ಪ್ರಚಾರ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.