
ಪ್ರಜಾವಾಣಿ ವಾರ್ತೆ
ಬೆಳಗಾವಿ: ತಾಲ್ಲೂಕಿನ ಬೆಕ್ಕಿನಕೇರಿಯಲ್ಲಿ ಜಾತ್ರೆ ಅಂಗವಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಪರಿಶೀಲಿಸಿದರು.
‘ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ₹3 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ನಿಗದಿತ ಅವಧಿಯಲ್ಲಿ ಅವುಗಳನ್ನು ಪೂರ್ಣಗೊಳಿಸಿ, ಭಕ್ತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಸೂಚಿಸಿದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಜಯವಂತ ಸಾವಂತ, ಮಲ್ಲಪ್ಪ ಗಾವಡೆ, ಗಜು ಮೋರೆ, ಅರುಣ ಗಾವಡೆ, ಮಹಾದೇವ ಬಾಂಡಗೆ, ನಾರಾಯಣ ಬಾಂಡಗೆ ಇತರರಿದ್ದರು.