ADVERTISEMENT

ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಶ್ರದ್ಧಾ ಶೆಟ್ಟರ್‌ಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 16:21 IST
Last Updated 20 ಅಕ್ಟೋಬರ್ 2021, 16:21 IST
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ದಿ.ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅವರನ್ನು ವಿವಿಧ ಹಳ್ಳಿಗಳ ಮುಖಂಡರು ಬುಧವಾರ ಒತ್ತಾಯಿಸಿದರು. ಸಂಸದೆ ಮಂಗಲಾ ಸುರೇಶ ಅಂಗಡಿ ಇದ್ದಾರೆ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ದಿ.ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅವರನ್ನು ವಿವಿಧ ಹಳ್ಳಿಗಳ ಮುಖಂಡರು ಬುಧವಾರ ಒತ್ತಾಯಿಸಿದರು. ಸಂಸದೆ ಮಂಗಲಾ ಸುರೇಶ ಅಂಗಡಿ ಇದ್ದಾರೆ   

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ದಿ.ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅವರನ್ನು ವಿವಿಧ ಹಳ್ಳಿಗಳ ಮುಖಂಡರು ಬುಧವಾರ ಒತ್ತಾಯಿಸಿದರು.

ಸಂಸದೆ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ಸಂಸದರೊಂದಿಗೆ ಅವರ ಪುತ್ರಿ ಶ್ರದ್ಧಾ ಅವರೊಂದಿಗೆ ಮಾತನಾಡಿದ ಮುಖಂಡರು ಕ್ಷೇತ್ರಕ್ಕೆ ಚುನಾವಣಾ ರಾಜಕಾರಣಕ್ಕೆ ಆಹ್ವಾನಿಸಿದರು. ‘ಸುರೇಶ ಅಂಗಡಿ ಅವರು ಇದ್ದಾಗ ಅವರನ್ನು ಬೆಂಬಲಿಸಿದ್ದೇವೆ. ಕ್ರಿಯಾಶೀಲರಾಗಿರುವ ನೀವು ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಬೆಂಬಲಿಸುವುದಕ್ಕೆ ಸಿದ್ಧವಿದ್ದೇವೆ’ ಎಂದು ತಿಳಿಸಿದರು. ಅವರಲ್ಲಿ ಕೆಲವರು ಗ್ರಾ.ಪಂ. ಸದಸ್ಯರೂ ಇದ್ದರು.

ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಶ್ರದ್ಧಾ, ‘ತಾಯಿ (ಮಂಗಲಾ) ಸಂಸದೆಯಾಗಿದ್ದಾರೆ. ನಾವೇನೇ ತೀರ್ಮಾನ ಕೈಗೊಳ್ಳುವುದಕ್ಕೂ ಹೈಕಮಾಂಡ್ ಸಮ್ಮತಿ ಬೇಕಾಗುತ್ತದೆ. ನಿಮ್ಮ ಅಭಿಮಾನಕ್ಕೆ ಧನ್ಯವಾದಗಳು’ ಎಂದಷ್ಟೆ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.