ADVERTISEMENT

ಬೆಳಗಾವಿ-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸದಂತೆ ಸಚಿವರಿಗೆ ಸಂಸದೆ ಪತ್ರ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 14:01 IST
Last Updated 27 ಅಕ್ಟೋಬರ್ 2024, 14:01 IST
 ಪ್ರಿಯಾಂಕಾ ಜಾರಕಿಹೊಳಿ 
 ಪ್ರಿಯಾಂಕಾ ಜಾರಕಿಹೊಳಿ    

ಬೆಳಗಾವಿ: ‘ಬೆಳಗಾವಿ-ಬೆಂಗಳೂರು ಮಾರ್ಗವಾಗಿ ಪ್ರತಿದಿನ ಬೆಳಿಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ಇಂಡಿಗೋ ಸಂಸ್ಥೆಯ ವಿಮಾನ ಸೇವೆ ಸ್ಥಗಿತಗೊಳಿಸಬಾರದು’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು, ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. 

‘ಈ ವಿಮಾನಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿ, ತುರ್ತು ಕೆಲಸ ಮುಗಿಸಿಕೊಂಡು ಒಂದೇ ದಿನದಲ್ಲಿ ವಾಪಸಾಗಲು ಅನುಕೂಲವಾಗಿತ್ತು. ಆದರೆ, ಅ.27ರಿಂದ ಈ ಸೇವೆ ಸ್ಥಗಿತಗೊಳಿಸುತ್ತಿರುವ ಮಾಹಿತಿ ಬಂದಿದೆ. ಈ ಸೇವೆ ಸ್ಥಗಿತವಾದರೆ, ಈ ಭಾಗದ ವಾಣಿಜ್ಯ ಚಟುವಟಿಕೆಗೆ ಹೊಡೆತ ಬೀಳಲಿದೆ. ಹಾಗಾಗಿ ಈ ನಿರ್ಧಾರ ಕೈಬಿಟ್ಟು, ಸೇವೆ ಮುಂದುವರಿಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT