ADVERTISEMENT

ಬೆಳಗಾವಿ: ಮೃಣಾಲ್‌ ವಿರುದ್ಧ ಪಂಚಮಸಾಲಿ ಅಸ್ತ್ರ?

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 0:02 IST
Last Updated 15 ಮಾರ್ಚ್ 2024, 0:02 IST
<div class="paragraphs"><p>ಬಿಜೆಪಿ–ಕಾಂಗ್ರೆಸ್‌</p></div>

ಬಿಜೆಪಿ–ಕಾಂಗ್ರೆಸ್‌

   

ಬೆಳಗಾವಿ: ಕಾಂಗ್ರೆಸ್‌ನಿಂದ ಬೆಳಗಾವಿ ಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಪುತ್ರ ಮೃಣಾಲ್‌ಗೆ ಟಿಕೆಟ್ ಖಾತ್ರಿಯಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಮೃಣಾಲ್‌ ಹೆಸರು ಅಂತಿಮ ಆಗುತ್ತಿದ್ದಂತೆಯೇ ಬಿಜೆಪಿ ನಾಯಕರು ‘ಜಾತಿ’ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮೃಣಾಲ್‌ ವಿರುದ್ಧ ಪಂಚಮಸಾಲಿ ಅಭ್ಯರ್ಥಿಯನ್ನೇ ನಿಲ್ಲಿಸಬೇಕು ಎಂಬುದು ಒಂದು ಗುಂಪಿನ ಬೇಡಿಕೆ. ಇದಕ್ಕೆ ಪೂರಕವಾಗಿ ಮಾಜಿ ಸಚಿವ ಮುರುಗೇಶ್‌ ನಿರಾಣಿ ಪ್ರಬಲ ಆಕಾಂಕ್ಷಿ ಆಗಿದ್ದಾರೆ.

ADVERTISEMENT

ಬೆಳಗಾವಿ ಲೋಕಸಭೆ ವ್ಯಾಪ್ತಿಯ ಬೆಳಗಾವಿ, ಬೈಲಹೊಂಗಲ, ಗೋಕಾಕ, ಸವದತ್ತಿ, ರಾಮದುರ್ಗ, ಮೂಡಲಗಿ ತಾಲ್ಲೂಕುಗಳಲ್ಲಿ ಪಂಚಮಸಾಲಿ ಸಮುದಾಯದ ಸಂಖ್ಯೆ ದೊಡ್ಡದು ಎಂಬ ಲೆಕ್ಕಾಚಾರವೂ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.