ADVERTISEMENT

ಮಹದಾಯಿ ಅಧಿಸೂಚನೆ; ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2020, 13:43 IST
Last Updated 28 ಫೆಬ್ರುವರಿ 2020, 13:43 IST
ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅಧಿಸೂಚನೆ ನೀಡಿರುವ ಹಿನ್ನಲೆಯಲ್ಲಿ ಕನ್ನಡ ಪರ ಸಂಘಟನೆಗಳು, ವಕೀಲ ಸಂಘದ ಕಾರ್ಯಕರ್ತರು ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಸಿಹಿ ಹಂಚಿ ಸಂಭ್ರಮಿಸಿದರು.
ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅಧಿಸೂಚನೆ ನೀಡಿರುವ ಹಿನ್ನಲೆಯಲ್ಲಿ ಕನ್ನಡ ಪರ ಸಂಘಟನೆಗಳು, ವಕೀಲ ಸಂಘದ ಕಾರ್ಯಕರ್ತರು ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಸಿಹಿ ಹಂಚಿ ಸಂಭ್ರಮಿಸಿದರು.   

ಬೆಳಗಾವಿ: ಮಹದಾಯಿ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದನ್ನು ಸ್ವಾಗತಿಸಿದ ಕಳಸಾ ಬಂಡೂರಿ ಹೋರಾಟಗಾರರು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಶುಕ್ರವಾರ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

‘ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನದಿ ನೀರು ಹಂಚಿಕೆ ಮಾಡಿಮಹದಾಯಿ ಜಲ ನ್ಯಾಯಮಂಡಳಿಯು ಐತೀರ್ಪು ನೀಡಿತ್ತು. ಈ ತೀರ್ಪಿನನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ, ಉತ್ತರ ಕರ್ನಾಟಕ ಭಾಗಕ್ಕೆ ಅದರಲ್ಲೂ ಮಹದಾಯಿ ಅಚ್ಚುಕಟ್ಟು ವ್ಯಾಪ್ತಿಯ ಜನಕ್ಕೆ ಸಿಹಿ ಸುದ್ದಿ ಕೊಟ್ಟಂತಾಗಿದೆ’ ಎಂದು ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ ಹೇಳಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮಾತನಾಡಿ, ‘ನಾಲ್ಕು ದಶಕಗಳ ಹೋರಾಟದ ಫಲವಾಗಿ ಜಯ ಸಿಕ್ಕಿದೆ. ಇದಕ್ಕಾಗಿ ಸರ್ಕಾರ, ಶಾಸಕರು, ಜನಪ್ರತಿನಿಧಿಗಳ ಹೋರಾಟ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನೀಡಿದ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೋರ್ಟ್‌ನಲ್ಲಿಮಹದಾಯಿ ಪರ ವಾದ ಮಂಡಿಸಿದ ರಾಜ್ಯದ ವಕೀಲರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದರು.

ADVERTISEMENT

ಪೊಲೀಸ್ ಸಿಬ್ಬಂದಿಗಳಿಗೂ ಸಿಹಿ ಹಂಚಿದರು. ಭಾರತೀಯ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಿದಗೌಡ ಮೊದಗಿ, ಕನ್ನಡ ಪರ ಸಂಘಟನೆಯ ಮಹಾಂತೇಶ ರಣಗಟಿಮಠ, ದೀಪಕ ಗುಡಗನಟ್ಟಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.