ADVERTISEMENT

ರಮೇಶ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ: ಮಹೇಶ ಕುಮಠಳ್ಳಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 12:46 IST
Last Updated 21 ಜೂನ್ 2021, 12:46 IST
ಮಹೇಶ ಕುಮಠಳ್ಳಿ
ಮಹೇಶ ಕುಮಠಳ್ಳಿ    

ಅಥಣಿ (ಬೆಳಗಾವಿ ಜಿಲ್ಲೆ): ‘ಶಾಸಕ ರಮೇಶ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ವಿಚಾರ ನನಗೆ ಗೊತ್ತಿಲ್ಲ’ ಎಂದು ಅಥಣಿ ಬಿಜೆಪಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ರಮೇಶ ಜೊತೆ ಮುಂಬೈಗೆ ಹೋಗಿಲ್ಲ. ಬೆಂಗಳೂರಲ್ಲಿದ್ದೆ. ಬೆಳಿಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜೀನಾಮೆ ಕೊಡುವುದಾಗಿ ಅವರು ನನ್ನೊಂದಿಗೆ ಅಥವಾ ಮಾಧ್ಯಮದ ಮುಂದೆಯೂ ಹೇಳಿಲ್ಲ. ಊಹಾ‍ಪೋಹಗಳು ಹರಿದಾಡುತ್ತಿರುವುದನ್ನು ನಾನೂ ಮಾಧ್ಯಮದಲ್ಲಿ ಗಮನಿಸಿದೆ’ ಎಂದು ಪ್ರತಿಕ್ರಿಯಿಸಿದರು.

‘ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರದ ಅವಧಿ ಪೂರೈಸಲಿದ್ದಾರೆ. ಈ ವಿಷಯದಲ್ಲಿ ಗೊಂದಲವಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.