ಯಮಕನಮರಡಿ: ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.
ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28} ಕೊಲೆಯಾದವರು.
ಯುವಕ ಬೈಕ್ ಮೇಲೆ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು. ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದರು. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ.
ಈ ಯುವಕನ ಶನಿವರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಮಾರನೇ ದಿನವೇ ಕೊಲೆಯಾಗಿದೆ.
ಯಮಕನಮರಡಿ ಪಿಎಸ್ಐ ಬಿ.ವಿ.ನಾಮಗೌಡಾ ಸ್ಥಳಕ್ಕೆ ಭೇಟ್ಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ವರ್ಷವ ಸತೀಶ ಜಾರಕಿಹೊಳಿ ಆಪ್ತರೊಬ್ಬರ ಮೇಲೆ ಈ ಯುವಕ ನಾಡಪಿಸ್ತೂಲಿನಿಂದ ಪೈರಿಂಗ್ ಮಾಡಿ ಪರಾರಿಯಾಗಿದ್ದ. ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.