ADVERTISEMENT

ಮಧ್ಯರಾತ್ರಿ ಮನೆಗೆ ನುಗ್ಗಿ ವ್ಯಕ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 13:35 IST
Last Updated 17 ಸೆಪ್ಟೆಂಬರ್ 2022, 13:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಇಲ್ಲಿನ ಕ್ಯಾಂಪ್‌ ಪ್ರದೇಶದ ಮೀನು ಮಾರ್ಕೆಟ್‌ ಬಳಿ ಶುಕ್ರವಾರ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಸುಧೀರ ಕಾಂಬಳೆ (57) ಕೊಲೆಯಾದವರು. ಸುಧೀರ ಮನೆಯಲ್ಲಿ ಮಲಗಿದ್ದಾಗ ಒಳನುಗ್ಗಿದ ದುಷ್ಕರ್ಮಿಗಳು ಅವರ ಹೊಟ್ಟೆ, ಕತ್ತು, ಮುಖಕ್ಕೆ ಮಾರಕಾಸ್ತ್ರಗಳಿಂದ ಹೊಡೆದರು. ಪಕ್ಕದ ಕೋಣೆಯಲ್ಲಿ ಅವರ ಪತ್ನಿ, ಮಕ್ಕಳು ಮಲಗಿದ್ದರೂ ವಿಷಯ ಗೊತ್ತಾಗಿಲ್ಲ. ಬೆಳಿಗ್ಗೆ ಎದ್ದು ನೋಡಿದಾಗಲೇ ಕೊಲೆಯಾಗಿದ್ದು ಗಮನಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಧೀರ ಹಲವು ವರ್ಷಗಳಿಂದ ದುಬೈನಲ್ಲಿ ವಾಸವಾಗಿದ್ದರು. ಕೋವಿಡ್‌ ಕಾರಣ ಒಂದೂವರೆ ವರ್ಷದ ಹಿಂದಷ್ಟೇ ಬೆಳಗಾವಿ ನಗರಕ್ಕೆ ಮರಳಿ ಕುಟುಂಬದೊಂದಿಗೆ ವಾಸವಾಗಿದ್ದರು. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಡಿಸಿಪಿ ರವೀಂದ್ರ ಗಡಾದಿ ತಿಳಿಸಿದ್ದಾರೆ.

ADVERTISEMENT

ಕ್ಯಾಂಪ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.