ಬೆಳಗಾವಿ: ‘ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸುವುದನ್ನು ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಾಯಕರು ವಿರೋಧಿಸಿದರೆ, ಅವರು ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಹೇಳಿದರು.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಬಂದ್ಗೆ ಕರೆ ನೀಡಿದ ಸಂಘಟನೆಗಳಲ್ಲೇ ಮರಾಠಾ ಸಮುದಾಯದವರಿದ್ದಾರೆ. ಮರಾಠಾ–ಮರಾಠಿ ನಡುವಿನ ವ್ಯತ್ಯಾಸವನ್ನು ಆ ಸಂಘಟನೆಗಳು ತಿಳಿದುಕೊಳ್ಳಬೇಕು. ಕನ್ನಡ ಮಾತನಾಡುವ ಹಲವರು ಮರಾಠಾ ಸಮಾಜದಲ್ಲಿದ್ದಾರೆ’ ಎಂದರು.
‘ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸುತ್ತಿರುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇವೆ. ಮರಾಠಾ ಸಮುದಾಯದಲ್ಲಿರುವ ಕನ್ನಡಿಗರಿಗೆ ಅನ್ಯಾಯ ಆಗಬಾರದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.