ADVERTISEMENT

ಕನ್ನಡ ಧ್ವಜ ತೆರವಿಗೆ ಎಂಇಎಸ್ ಗಡುವು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 16:29 IST
Last Updated 1 ಮಾರ್ಚ್ 2021, 16:29 IST

ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಸಂಘಟನೆಗಳು ಹಾರಿಸಿರುವ ಕನ್ನಡ ಧ್ವಜವನ್ನು ಮಾರ್ಚ್ 8ರ ಒಳಗೆ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಧ್ಯಕ್ಷ ದೀಪಕ ದಳವಿ ಎಚ್ಚರಿಕೆ ನೀಡಿದರು.

ಇಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪಾಲಿಕೆ ಎದುರು ಕನ್ನಡ ಬಾವುಟವನ್ನು ಅಕ್ರಮವಾಗಿ ಹಾರಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ನಮ್ಮೊಂದಿಗೆ ಮಾತನಾಡಿದ ಜಿಲ್ಲಾಡಳಿತದ ಅಧಿಕಾರಿಗಳು, ಸಮಯ ಕೇಳಿದ್ದರು. ಆದರೆ ಇದುವರೆಗೂ ನಮಗೆ ನ್ಯಾಯ ಒದಗಿಸಿಲ್ಲ. ಮುಂದೆ ಚುನಾವಣೆ ಘೋಷಣೆಯಾದರೆ ನಮಗೆ ಯಾವುದೇ ರೀತಿಯ ಪ್ರತಿಭಟನೆಗೆ ಅವಕಾಶ ಸಿಗುವುದಿಲ್ಲ. ಆದ್ದರಿಂದ ಎಲ್ಲ ಮರಾಠಿ ಪರ ಸಂಘಟನೆಗಳ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಕನ್ನಡ ಧ್ವಜ ತೆರವುಗೊಳಿಸದಿದ್ದರೆ ಮಾರ್ಚ್‌ 8ರಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT