ADVERTISEMENT

ಕೋಯ್ನಾದಿಂದ ಕೃಷ್ಣಾಗೆ ನೀರು: ಸಚಿವ ಡಿಕೆಶಿ ಸಭೆ 6ರಂದು

​ಪ್ರಜಾವಾಣಿ ವಾರ್ತೆ
Published 5 ಮೇ 2019, 15:30 IST
Last Updated 5 ಮೇ 2019, 15:30 IST

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿಗೆ ತೀವ್ರ ಕೊರತೆಯಾಗಿದ್ದು, ಪಕ್ಕದ ಮಹಾರಾಷ್ಟ್ರ ರಾಜ್ಯದಿಂದ ಕೃಷ್ಣಾ ಹಾಗೂ ಭೀಮಾ ನದಿಗೆ ನೀರು ಪಡೆಯುವ ಪ್ರಯತ್ನದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಸೋಮವಾರ ನಗರದಲ್ಲಿ ಶಾಸಕರು ಹಾಗೂ ಸಂಸದರ ಸಭೆ ನಡೆಸಲಿದ್ದಾರೆ.

ಇಲ್ಲಿನ ನೀರಾವರಿ ನಿಗಮದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಿಗದಿಯಾಗಿದೆ. ಬೆಳಗಾವಿ ಸೇರಿದಂತೆ ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು ಒಂದು ಗಂಟೆಯವರೆಗೆ ಸಭೆ ನಡೆಯುವ ನಿರೀಕ್ಷೆ ಇದೆ. ನಂತರ ಅವರು ಕುಂದಗೋಳ ಉಪಚುನಾವಣೆ ಪ್ರಚಾರಕ್ಕೆ ತೆರಳಲಿದ್ದಾರೆ.

ಒಪ್ಪಂದದ ಬಗ್ಗೆಯೂ ಚರ್ಚೆ:

ADVERTISEMENT

ಕೃಷ್ಣಾ ತೀರದ ಜನರಿಗೆ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ನೀರು ಪೂರೈಸಿದರೆ, ಮಹಾರಾಷ್ಟ್ರದ ಜತ್ತ ಹಾಗೂ ಸಾಂಗ್ಲಿ ಜನರಿಗೆ ಆಲಮಟ್ಟಿ ಜಲಾಶಯದಿಂದ ನೀರು ಪೂರೈಸಬೇಕು ಎನ್ನುವ ಒಪ್ಪಂದದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.