ADVERTISEMENT

ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶಾಸಕರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 11:52 IST
Last Updated 3 ಜುಲೈ 2020, 11:52 IST
ಬೆಳಗಾವಿಯ ಮಹಾಂತ ಭವನದ ಆವರಣದಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಶಾಸಕ ಅನಿಲ ಬೆನಕೆ ಸಂಭ್ರಮ ಆಚರಿಸಿದರು
ಬೆಳಗಾವಿಯ ಮಹಾಂತ ಭವನದ ಆವರಣದಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಶಾಸಕ ಅನಿಲ ಬೆನಕೆ ಸಂಭ್ರಮ ಆಚರಿಸಿದರು   

ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಇಲ್ಲಿನ ಮಹಾಂತೇಶ ನಗರದ ಮಹಾಂತ ಭವನದ ಆವರಣದಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮ ಆಚರಿಸಿದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ನೀಡಿದ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲಾಗಿತ್ತು. ಉತ್ತರ ಕ್ಷೇತ್ರದಲ್ಲಿ ಬಡ ಮಕ್ಕಳಿಗೆ ಉಚಿತವಾಗಿ ವಾಹನ ವ್ಯವಸ್ಥೆಯನ್ನು ಮಾಡಿದ್ದೆ. ಇದಕ್ಕೆ ಸಹಕರಿಸಿದ ಆಟೊರಿಕ್ಷಾ, ವ್ಯಾನ್‌, ಟೆಂಪೊ, ಕಾರ್‌ಗಳ ಚಾಲಕರು ಹಾಗೂ ಮಾಲೀಕರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.

ವಿದ್ಯಾರ್ಥಿಗಳಿಗೆ ಉಪಹಾರ ಮಾಡಿಸಿ, ಬೀಳ್ಕೊಡುಗೆ ನೀಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.