ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸಿದ್ದಾರೆ.
ಆಸ್ಪತ್ರೆಯ ವೆಚ್ಚ ಭರಿಸುವ ಸಾಮರ್ಥ್ಯ ಇಲ್ಲದವರಿಗೆ ನೆರವಾಗಿದ್ದಾರೆ. ಅವರವರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದೆ. ಈ ಕುರಿತ ದಾಖಲೆಗಳನ್ನು ಶಾಸಕರು ಗುರುವಾರ ಸಂಬಂಧಿಸಿದವರಿಗೆ ನೀಡಿದರು.
‘ಆರೋಗ್ಯವೇ ಭಾಗ್ಯ. ಹೀಗಾಗಿ, ಆ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು. ಧೃತಿಗೆಡಬೇಕಾಗಿಲ್ಲ. ಗ್ರಾಮೀಣ ಕ್ಷೇತ್ರದಲ್ಲಿ ಅನಾರೋಗ್ಯಪೀಡಿತರಾದವರಿಗೆ ನನ್ನಿಂದ ಸಾಧ್ಯವಾದ ಮಟ್ಟಿಗೆ ನೆರವು ಒದಗಿಸುತ್ತಿದ್ದೇನೆ’ ಎಂದರು.
ಮುಖಂಡರಾದ ಯುವರಾಜ ಕದಂ, ನಾಗೇಶ ದೇಸಾಯಿ, ಬಾಗಣ್ಣ ನರೋಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.