ADVERTISEMENT

‘ಮಂದಿರಕ್ಕೆ ₹ 25 ಲಕ್ಷ ಮಂಜೂರು’

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 16:06 IST
Last Updated 14 ಆಗಸ್ಟ್ 2022, 16:06 IST
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತರದ ಸಾಂಬ್ರಾದಲ್ಲಿ ಶನಿವಾರ ಬಸವೇಶ್ವರ ದೇವಸ್ಥಾನ ನಿರ್ಮಾಣದ ಕುರಿತು ನಡೆದ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿದರು
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತರದ ಸಾಂಬ್ರಾದಲ್ಲಿ ಶನಿವಾರ ಬಸವೇಶ್ವರ ದೇವಸ್ಥಾನ ನಿರ್ಮಾಣದ ಕುರಿತು ನಡೆದ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿದರು   

ಸಾಂಬ್ರಾ: ಇಲ್ಲಿನ ಬಸವೇಶ್ವರ ಮಂದಿರ ನಿರ್ಮಾಣಕ್ಕಾಗಿ ₹25 ಲಕ್ಷ ಮಂಜೂರು ಮಾಡಿಸಿದ್ದು, ಮಂದಿರ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶಾಸಕಿಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಗ್ರಾಮದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ದೇವಸ್ಥಾನದ ರೂಪುರೇಷೆ ಕುರಿತಂತೆ ಗ್ರಾಮದ ಹಿರಿಯರು, ಮಹಿಳೆಯರು, ಭಕ್ತರೊಂದಿಗೆ ಚರ್ಚಿಸಿದರು.

ಗ್ರಾಮಸ್ಥರ ಆಶಯದಂತೆ ಹಣ ಮಂಜೂರು ಮಾಡಿಸಲಾಗಿದೆ. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು.

ADVERTISEMENT

ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ನಾಗೇಶ ದೇಸಾಯಿ, ಈರಪ್ಪ ಸುಳೇಭಾವಿ, ಸದು ಪಾಟೀಲ, ಶಿವಾಜಿ ದೇಸಾಯಿ, ಲಕ್ಷ್ಮಣ ಕೊಳೆಪ್ಪಗೋಳ, ಮಹೇಶ ಕುಲಕರ್ಣಿ, ಪ್ರಶಾಂತ ಗಿರಿಮಲ್, ಸಂತೋಷ ದೇಸಾಯಿ, ಗುರುನಾಥ ಅಷ್ಟೇಕರ್, ಖಯೂಮ್‌ ಅತ್ತಾರ, ಉಲ್ಲಾಸ ಬೊಮ್ಮನವಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.