ಬೆಳಗಾವಿ: ಚಲಿಸುತ್ತಿದ್ದ ರೈಲಿನಡಿ ಆಕಸ್ಮಿಕವಾಗಿ ಸಿಲುಕಿ ಕಾಲುಗಳನ್ನು ಕಳೆದುಕೊಂಡಿದ್ದ ವ್ಯಕ್ತಿಯ ಚಿಕಿತ್ಸೆಗೆ ನೆರವಾಗುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮಾನವೀಯತೆ ಮೆರೆದಿದ್ದಾರೆ.
ತಮ್ಮ ಕ್ಷೇತ್ರದ ಪಾಶ್ಚಾಪುರದ ಅಕಾನಿಬಾಷಾ ದರ್ಗಾದ ಜೀರ್ಣೋದ್ಧಾರ ಕೆಲಸಕ್ಕಾಗಿ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಅಮರಾವತಿಯಿಂದ ಬಂದಿದ್ದ ಕಾರ್ಮಿಕ ವಿಜಯ ಆಸೂರಕರ್, ತನ್ನೂರಿಗೆ ವಾಪಸಾಗುವಾಗ ದುರ್ಘಟನೆ ನಡೆದಿತ್ತು. ಆಕಸ್ಮಿಕವಾಗಿ ಬಿದ್ದಿದ್ದ ಅವರು ಗಂಭೀರವಾಗಿ ಗಾಯಗೊಂಡು, ಸಾವು–ಬದುಕಿನ ಮಧ್ಯೆ ಹೋರಾಡುತ್ತಿದ್ದರು. ವಿಷಯ ತಿಳಿದ ಶಾಸಕರು, ತಮ್ಮ ಕಾರ್ಯಕರ್ತರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು.
ಚಿಕಿತ್ಸೆಯ ಸಂಪೂರ್ಣ ಖರ್ಚನ್ನು ಶಾಸಕರೇ ನೋಡಿಕೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಾಗೂ ಜೀವನ ನಿರ್ವಹಣೆಗಾಗಿ ₹ 1 ಲಕ್ಷ ಧನಸಹಾಯವನ್ನೂ ಮಾಡಿದ್ದಾರೆ. ಶಾಸಕರ ಮಾರ್ಗದರ್ಶನದಲ್ಲಿ ಪಾಶ್ಚಾಪೂರದ ಸಮಾಜ ಸೇವಕರಾದ ಖಲೀಲ ಪೀರಜಾದೆ, ಸೈಯದ್ ಮಕಾನದಾರ, ಅಶ್ಪಾಕ್ ದರ್ಗಾ, ಫಜಲ್ ಮಕಾನದಾರ, ಬಾಬಾಸಾಬ ದರ್ಗಾ, ರಫೀಕ ಪೀರಜಾದೆ, ಜಾಕೀರ ದರ್ಗಾ ಕಾರ್ಮಿಕ ಚೇತರಿಸಿಕೊಳ್ಳಲು ನೆರವಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.