ADVERTISEMENT

ಬೆಳೆ ಹಾನಿ ವೀಕ್ಷಿಸಿದ ಶಾಸಕ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 16:28 IST
Last Updated 5 ಆಗಸ್ಟ್ 2019, 16:28 IST
ಬೆಳಗಾವಿ ತಾಲ್ಲೂಕಿನ ಹುದಲಿ ಸಮೀಪದಲ್ಲಿ ಬೆಳೆ ಹಾನಿಯಾಗಿರುವುದನ್ನು ಶಾಸಕ ಸತೀಶ ಜಾರಕಿಹೊಳಿ ಸೋಮವಾರ ವೀಕ್ಷಿಸಿದರು
ಬೆಳಗಾವಿ ತಾಲ್ಲೂಕಿನ ಹುದಲಿ ಸಮೀಪದಲ್ಲಿ ಬೆಳೆ ಹಾನಿಯಾಗಿರುವುದನ್ನು ಶಾಸಕ ಸತೀಶ ಜಾರಕಿಹೊಳಿ ಸೋಮವಾರ ವೀಕ್ಷಿಸಿದರು   

ಬೆಳಗಾವಿ: ತಾಲ್ಲೂಕಿನ ಹುದಲಿ, ಮುಚ್ಚಂಡಿ ಗ್ರಾಮಗಳಲ್ಲಿ ಮಳೆಯಿಂದ ಆಗಿರುವ ಹಾನಿಯನ್ನು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಸೋಮವಾರ ವೀಕ್ಷಿಸಿದರು. ಸ್ಥಳೀಯರಿಗೆ ಸಾಂತ್ವನ ಹೇಳಿದರು.

‘ಇಲ್ಲಿ ಈ ಬಾರಿ ಸಾಕಷ್ಟು ಮಳೆಯಾದ ಪರಿಣಾಮ ಹೊಲ–ಗದ್ದೆಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಬಡ ಜನರ ಬದುಕು ತತ್ತರಿಸಿದೆ. ಹೀಗಾಗಿ, ಮುಂದಿನ ವರ್ಷಗಳಲ್ಲಿ ಮಳೆಗೆ ಮುನ್ನವೇ ಎಚ್ಚರಿಕೆ ವಹಿಸುವಂತೆ ಹಾಗೂ ಜಮೀನುಗಳಿಗೆ ನೀರು ನುಗ್ಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಹುದಲಿ ಕ್ಷೇತ್ರದ ಸದಸ್ಯೆ ಯಲ್ಲವ್ವ ಬುಡ್ರಿ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಎಪಿಎಂಸಿ‌ ಅಧ್ಯಕ್ಷ ಆನಂದ ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.