ADVERTISEMENT

ಪರಿಷತ್ ಚುನಾವಣೆ: ಬಿಜೆಪಿ ಕಾರ್ಯತಂತ್ರ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 13:57 IST
Last Updated 28 ನವೆಂಬರ್ 2021, 13:57 IST
ಬೆಳಗಾವಿಯಲ್ಲಿ ಭಾನುವಾರ ನಡೆದ ಬಿಜೆಪಿ ಸಭೆಯಲ್ಲಿ ಮುಖಂಡರು ಪಾಲ್ಗೊಂಡಿದ್ದರು
ಬೆಳಗಾವಿಯಲ್ಲಿ ಭಾನುವಾರ ನಡೆದ ಬಿಜೆಪಿ ಸಭೆಯಲ್ಲಿ ಮುಖಂಡರು ಪಾಲ್ಗೊಂಡಿದ್ದರು   

ಬೆಳಗಾವಿ: ವಿಧಾನಪರಿಷತ್ ಚುನಾವಣೆ ಕಾರ್ಯತಂತ್ರದ ಕುರಿತು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ನಗರದಲ್ಲಿ ಪಕ್ಷದ ಮುಖಂಡರ ಸಭೆ ನಡೆಯಿತು.

ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಸಚಿವ ಉಮೇಶ ಕತ್ತಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಸಾಬಣ್ಣ ತಳವಾರ, ಶಾಸಕರಾದ ಮಹಾಂತೇಶ ದೊಡ್ಡಗೌಡರ, ದುರ್ಯೋಧನ ಐಹೊಳೆ, ಮಹೇಶ ಕುಮಠಳ್ಳಿ, ಮಹಾದೇವಪ್ಪ ಯಾದವಾಡ, ಪಕ್ಷದ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟೆ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ್ ನೆರ್ಲಿ, ಮುಖಂಡರಾದ ಬಸವರಾಜ ಯಕಂಚಿ, ಶಶಿಕಾಂತ ನಾಯಿಕ, ಅಮರಸಿಂಹ ಪಾಟೀಲ, ವಿಶ್ವನಾಥ ಪಾಟೀಲ, ಉಜ್ವಲಾ ಬಡವನಾಚೆ ಮೊದಲಾದವರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.