ADVERTISEMENT

ವಿಧಾನಪರಿಷತ್ ಚುನಾವಣೆ: ನಾನು ಯಾರನ್ನೂ ಪ್ರವಾಸಕ್ಕೆ ಕಳುಹಿಸುತ್ತಿಲ್ಲ –ಲಕ್ಷ್ಮಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 16:45 IST
Last Updated 7 ಡಿಸೆಂಬರ್ 2021, 16:45 IST
ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ   

ಬೆಳಗಾವಿ: ‘ಇದೇ ಡಿ.10ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಲಕ್ಷ್ಮಿ ಹೆಬ್ಬಾಳಕರ ನಮ್ಮನ್ನು ಪ್ರವಾಸಕ್ಕೆ ಕರೆದಿದ್ದಾರೆ ಎಂದು ಕೆಲವರು ತಿಳಿಸುವ ಮೂಲಕ ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ನಾನು ಯಾರನ್ನೂ ಪ್ರವಾಸಕ್ಕೆ ಕಳುಹಿಸುತ್ತಿಲ್ಲ. ಮತದಾರರು ಯಾಮಾರಬಾರದು’ ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

ವಿಡಿಯೊ ಹೇಳಿಕೆಯೊಂದನ್ನು ಮಂಗಳವಾರ ಬಿಡುಗಡೆ ಮಾಡಿರುವ ಅವರು, ‘ಯಾವುದೇ ಒತ್ತಡ, ಧಮ್ಕಿಗೆ ಹೆದರುವ ಅಗತ್ಯವಿಲ್ಲ. ಇಲ್ಲೇ ಇದ್ದು ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಿರಿ. ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಸೋಣ’ ಎಂದು ಕೋರಿದ್ದಾರೆ.

‘ನಾನು ಮತ್ತು ನನ್ನ ಪಕ್ಷ ಸದಾ ನಿಮ್ಮೊಂದಿಗಿರುತ್ತದೆ. ಯಾರಿಗೂ ಹೆದರಬೇಕಿಲ್ಲ. ಧೈರ್ಯದಿಂದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.