ಬೆಳಗಾವಿ: ಇದೇ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಇಲ್ಲಿನ ಜ್ಯೋತಿ ಕಾಲೇಜಿನಲ್ಲಿ ಭಾನುವಾರ ತರಬೇತಿ ನೀಡಲಾಯಿತು.
ತರಬೇತುದಾರರಾದ ನಾಗರಾಜ ಮರೆಣ್ಣವರ, ಮತದಾನದ ಮುನ್ನಾ ದಿನವಾದ ಡಿ.9ರ ಬೆಳಿಗ್ಗೆ 10 ಗಂಟೆಯಿಂದ ಮತದಾನ ದಿನವಾದ ಡಿ.10ರ ಸಂಜೆ 4ರವರೆಗೆ ಅಂದರೆ ಮತದಾನ ಕೊನೆಗೊಳ್ಳುವ ಅವಧಿಯವರೆಗೆ ಮತಗಟ್ಟೆ ಅಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಕೆಲಸ ಕಾರ್ಯಗಳ ವಿಧಾನವನ್ನು ತಿಳಿಸಿಕೊಟ್ಟರು.
ಮತಗಟ್ಟೆಗೆ ತೆರಳುವ ಮುಂಚೆ ಮತಪೆಟ್ಟಿಗೆಗಳು, ಮತದಾರರ ಪಟ್ಟಿ ಸೇರಿದಂತೆ ಚೆಕ್ಲಿಸ್ಟ್ ಪ್ರಕಾರ ಎಲ್ಲ ಅಗತ್ಯ ಸಾಮಗ್ರಿಗಳನ್ನು ಪಡೆದುಕೊಳ್ಳಬೇಕು. ಮತದಾನ ಆರಂಭಗೊಳ್ಳುವ ಮುಂಚೆ ಏಜೆಂಟರ ಸಮ್ಮುಖದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮತಪೆಟ್ಟಿಗೆ ಸಿದ್ಧತೆ ಮಾಡಿಕೊಳ್ಳುವುದು ಸೇರಿದಂತೆ ಮತದಾನ ಮುಕ್ತಾಯದವರೆಗೆ ಪಾಲಿಸಬೇಕಾದ ನಿಯಮಗಳನ್ನು ವಿವರಿಸಿದರು.
ತಹಶೀಲ್ದಾರ್ ಆರ್.ಕೆ. ಕುಲಕರ್ಣಿ, ಮತಗಟ್ಟೆಗಳ ಪಿಆರ್ಒ ಹಾಗೂ ಎಪಿಆರ್ಒಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.