ಬೆಳಗಾವಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡ, ಉದ್ಯಮಿ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಸೋಮವಾರ ಅಧಿಕೃತವಾಗ ಟಿಕೆಟ್ ಪ್ರಕಟವಾಗಿದೆ.
ಬೆಳಿಗ್ಗೆ 5.30ಕ್ಕೆ ಸುಳೇಬಾವಿಯ ಮಹಾಲಕ್ಷ್ಮಿ ದೇವಾಲಯದಲ್ಲಿ ಹಾಗೂ 7 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಅವರು ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಸಿಪಿಇಡಿ ಮೈದಾನದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಅಭಿಮಾನಿಗಳು ಸೇರಲಿದ್ದು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಲಕ್ಷ್ಮಿ ಹೆಬ್ಬಾಳಕರ, ಮುಖಂಡರಾದ ಎ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಅಶೋಕ ಪಟ್ಟಣ, ಶಾಮ್ ಘಾಟಗೆ, ಕಾಕಾಸಾಹೇಬ ಪಾಟೀಲ, ಫಿರೋಜ್ ಸೇಠ್, ವಿನಯ ನಾವಲಗಟ್ಟಿ, ರಾಜು ಸೇಠ್, ಸುನೀಲ ಹನುಮಣ್ಣವರ, ರಾಜು ಕಾಗೆ, ವೀರಕುಮಾರ ಪಾಟೀಲ, ಮಹಾವೀರ ಮೋಹಿತೆ, ಗಜಾನನ ಮಂಗಸೂಳಿ, ವಿಶ್ವಾಸ ವೈದ್ಯ ಮೊದಲಾದವರು ನಾಮಪತ್ರ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.