ADVERTISEMENT

ಸೌಹಾರ್ದ ಮೊಹರಂ ಆಚರಣೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 15:03 IST
Last Updated 30 ಜುಲೈ 2023, 15:03 IST
ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಹುಣಶಿಕಟ್ಟಿಯಲ್ಲಿ ಶನಿವಾರ ಮೊಹರಂ ಅಂಗವಾಗಿ ಡೋಲಿಗಳ ಮೆರವಣಿಗೆ ನಡೆಯಿತು
ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಹುಣಶಿಕಟ್ಟಿಯಲ್ಲಿ ಶನಿವಾರ ಮೊಹರಂ ಅಂಗವಾಗಿ ಡೋಲಿಗಳ ಮೆರವಣಿಗೆ ನಡೆಯಿತು   

ಹುಣಶಿಕಟ್ಟಿ: ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಹುಣಶಿಕಟ್ಟಿಯಲ್ಲಿ ಶನಿವಾರ ಮೊಹರಂ ಹಬ್ಬವನ್ನು ಶಾಂತಿ–ಸೌಹಾರ್ದದಿಂದ ಆಚರಿಸಲಾಯಿತು.

ಬೆಳಗ್ಗೆಯಿಂದಲೇ ದರ್ಗಾದಿಂದ ಅಲಾಯಿ ಹಾಗೂ ಪಂಜಾಗಳನ್ನು ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಯಿತು. ಮುಸ್ಲಿಂ ಧರ್ಮಗುರುಗಳು ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸಿದರು.

ಮುಸ್ಲಿಂ ಹಾಗೂ ಹಿಂದೂ ಧರ್ಮೀಯರು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಮಹಿಳೆಯರು ದೇವರಿಗೆ ವಿವಿಧ ಖಾದ್ಯಗಳನ್ನು ಮಾಡಿ ನೈವೇದ್ಯ ನೀಡಿದರು. ಯುವಜನರು ಗ್ರಾಮದ ಪ್ರಮುಖ ಬೀದಿಗಳನ್ನು ಮೆರವಣಿಗೆ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.